Categorized | ರಾಜ್ಯ

ಹೊಸ ಪಿಂಚಣಿ ಯೋಜನೆ ಜಾರಿ

Posted on 20 January 2010 by murthy

MOU Signing for NEW Pension Scheme for State Govt Employeesಬೆಂಗಳೂರು, ಜ.20: ಏಪ್ರಿಲ್ 1, 2006ರ ನಂತರ ಸರ್ಕಾರಿ ಸೇವೆಗೆ ಸೇರಿರುವ ಸುಮಾರು 60 ಸಾವಿರ ಮಂದಿ ನೌಕರರಿಗೆ ವರದಾನವಾಗುವಂತಹ ಪಿಂಚಣಿ ಯೋಜನೆ ಜಾರಿಗೊಳಿಸುವ ಮಹತ್ವದ ಒಡಂಬಡಿಕೆಗೆ ರಾಜ್ಯ ಸರ್ಕಾರ ಮತ್ತು ಎಂಪಿಎಸ್ ಟ್ರಸ್ಟ್ ಇಂದು ಅಂಕಿತ ಹಾಕಿದೆ.
ಈ ಸಂಬಂಧ ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸಮೂರ್ತಿ, ಎಂಪಿಎಸ್ ಟ್ರಸ್ಟ್ನ ಎನ್.ಆರ್. ರಾಯಲು ಹಾಗೂ ಎನ್ಎಸ್ಡಿಎಲ್ನ ಜಗನ್ ರಾಯಿ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದರು.
ಪ್ರತಿ ವರ್ಷ 15 ರಿಂದ 20 ಸಾವಿರ ನೌಕರರು ಈ ಹೊಸ ಪಿಂಚಣಿ ಯೋಜನೆ ವ್ಯಾಪ್ತಿಗೆ ಸೇರಲಿದ್ದಾರೆ.
ನಿವೃತ್ತಿ ನಂತರ ನೌಕರರಿಗೆ ಈ ಸೌಲಭ್ಯ ದೊರಕಲಿದ್ದು, ಒಂದು ಏಳೆ ನೌಕರರು ಮೃತಪಟ್ಟಲ್ಲಿ ಅವರ ಅವಲಂಭಿತರಿಗೆ ಈ ಪ್ರಯೋಜನೆ ದೊರಕಲಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ನಮ್ಮ ಸರ್ಕಾರ ಸರ್ಕಾರಿ ನೌಕರರಿಗೆ ಗರಿಷ್ಠ ಸೌಲಭ್ಯ ಕಲ್ಪಿಸಿಕೊಟ್ಟಿದೆ. ವಿವಿಯ ಬೋಧಕ ಸಿಬ್ಬಂದಿಗೆ ಯುಜಿಸಿ ವೇತನ ನೀಡುತ್ತಿದೆ. 5ನೇ ವೇತನ ಶಿಫಾರಸ್ಸುಗಳನ್ನು ಜಾರಿಗೆ ತರಲಾಗಿದೆ ಎಂದರು.
ರಾಜ್ಯ ಸರ್ಕಾರಿ ನೌಕರರ ನಿವೃತ್ತಿ ವಯೋಮಿತಿಯನ್ನು 50 ವರ್ಷಗಳಿಗೆ ಹೆಚ್ಚಳ ಮಾಡಿದ ಕೀರ್ತಿ ಕೂಡ ಬಿಜೆಪಿ ಸರ್ಕಾರಕ್ಕೆ ಇದೆ ಎಂದರು.

Leave a Reply

ಅರುಣಾಚಲ ಒಟ್ಟು ಸ್ಥಾನ- 60 ಆಳ್ವಾಸ್ ನುಡಿಸಿರಿ ಇಂಜಿನಿ ಯರ್ ಎ. ಕೆ. ಅಂಟನಿ ಕುಂದಿಲ್ ಕುಂದಿಲ್ ಆಯರ್ನ್ ವರ್ಕ್ಸ್ ಕೇಂದ್ರ ರಕ್ಷಣಾ ಸಚಿವ ಗಣಿದೊರೆ ಚೀನಾ ಓಪನ್ ಟೆನಿಸ್ ಡಾ.ವೀರೇಂದ್ರ ಹೆಗ್ಗಡೆ ದೇಣಿಗೆಯ ನಿಧಿ ನವ್ಹೆಂಬರ 6 ನಾರಾಯಣಗೌಡ ನಿಧಿ ಸಂಗ್ರಹ ನೂರಕ್ಕೂ ಹೆಚ್ಚು ಜನರ ಬಂಧನ ನೂರು ಕೋಟಿ ನೆರೆ ಹಾವಳಿ ಪರಿಹಾರ ಪಾಕಿಸ್ತಾನ ಫ್ರೆಂಚ್ ಸೂಪರ್ ಸೀರೀಸ್ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಬ್ರಿಟನ್ ರಾಣಿ ಮಹಾಪೌರ ಮಹಾರಾಷ್ಟ್ತ್ರ ಒಟ್ಟು ಸ್ಥಾನ - 288 ಮಹಾರಾಷ್ಟ್ತ್ರದಲ್ಲಿ ಕಾಂಗ್ರೆಸ್ ಎನ್ಸಿಪಿ ಸಾಥ್ ಸಾಥ್ ಯಡ್ಡಿಯಿಂದ ಬಳ್ಳಾರಿಗೆ ಬ್ರೇಕ್ ಲೋಂಡಾ ವಾಟರ ಪಂಪ್ಹೌಸ್ ಧ್ವಂಸ ವಿಕಾಸ ಸಂಕಲ್ಪ ಉತ್ಸವ ವಿಜ್ಞಾನ ವ್ಯಾಸಂಗ ಸೈನಾ ಹರಿಯಾಣ - ಒಟ್ಟು ಸ್ಥಾನ - 90 7 8 city carporation belagavi cm cricket flood krv reddy saina nehwal yadiyurappa z.p

Archives