ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷರಾಗಿ ಸಿಂಧ್ಯಾ
Posted on 20 January 2010 by murthy
ಬೆಂಗಳೂರು, ಜ. 20: ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ಹಿರಿಯ ಧುರೀಣ ಪಿ.ಜಿ.ಆರ್. ಸಿಂಧ್ಯಾ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಷ್ಟ್ತ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರುಚಿ ಇಂದು ಇಲ್ಲಿ ಪ್ರಕಟಿಸಿದರು.
ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಸಮಾಲೋಚನೆ ನಡೆಸಿ ಸಿಂಧ್ಯಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಪಕ್ಷವನ್ನು ರಾಷ್ಟ್ತ್ರ ಮಟ್ಟದಲ್ಲಿ ಬೆಳೆಸಿಕೊಳ್ಳುವುದರಲ್ಲಿ ಸಿಂಧ್ಯಾ ಸಮರ್ಥರಾಗಿದ್ದಾರೆ. ಆದರೆ ಮೂಲ ಸೌಲಭ್ಯದ ಕೊರತೆಯಿಂದ ಅವರನ್ನು ರಾಜ್ಯ ಮಟ್ಟಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದರು.
